ಬಿಸಿಲ ಬೇಗೆಯಲ್ಲಿ ಬೆಂದಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಬೆಂಗಳೂರು, ಮಾ.07 : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ. ಧಾರಾಕಾರ ಮಳೆಯಿಂದಾಗಿ ಜಯನಗರದ 7ನೇ ಹಂತದ ಬಳಿ ಹೋರ್ಡಿಂಗ್ ವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತವಾಗಿದೆ. ನಗರದ ಶಾಂತಿನಗರ, ಬಸವನಗುಡಿ, ಜಯನಗರ, ಚಾಮರಾಜಪೇಟೆ, ಟೌನ್ ಹಾಲ್, ನೆಲಮಂಗಲ ಮತ್ತು ಮೈಸೂರು ರೋಡ್ ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಿದೆ. ಬೆಳಗ್ಗೆಯಿಂದ ಸಂಜೆ ವರೆಗೆ ಬಿರು ಬಿಸಿಲಿಗೆ ಬೇಗಿದ್ದ ಜನರಿಗೆ ವರುಣ ಕೊಂಚ ತಂಪೆರೆದಿದ್ದಾನೆ.
ದಿಢೀರನೆ ಸುರಿದ ಭಾರಿ ಮಳೆಯಿಂದ ನಗರದ ಹಲವೆಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments