Thursday, April 18, 2024
Homeರಾಜ್ಯವಿಧಾನಸಭೆಯಲ್ಲಿ ಪ್ರತಿಧ್ವನಿಸಿದ`ಶಾಸಕರ ವೈರಲ್ ಆಡಿಯೋ'

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ`ಶಾಸಕರ ವೈರಲ್ ಆಡಿಯೋ’

ಬೆಂಗಳೂರು,ಫೆ.15- ಮಂಗಳೂರು ಭಾಗದಲ್ಲಿ ಶಾಸಕರ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರ ವಿಧಾನಸಭೆಯಲ್ಲಿಂದು ಪ್ರಸ್ತಾಪಗೊಂಡು ಕೋಲಾಹಲ ನಿರ್ಮಾಣವಾಯಿತು. ಪ್ರಶ್ನೋತ್ತರದ ಬಳಿಕ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ ವಿಷಯ ಪ್ರಸ್ತಾಪಿಸಿ, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನನ್ನ ಮತ್ತು ಶಾಸಕ ವೇದವ್ಯಾಸ್ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಸೆಂಟ್ ಥೆರೇಸಾ ಶಾಲೆಯಲ್ಲಿ 7ನೇ ತರಗತಿ ವಿದ್ಯಾರ್ಥಿಗೆ ಹಿಂದೂ ಧರ್ಮದ ಬಗ್ಗೆ ಅಪನಂಬಿಕೆ ಬರುವಂತೆ ಮಾತುಗಳನ್ನು ಹೇಳಲಾಗಿದ್ದು, ಇದರ ಬಗ್ಗೆ ಪೋಷಕರು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ದೂರು ನೀಡಲು ಬಂದಿದ್ದರು. ಆ ವೇಳೆ ಶರಣ ಪಂಪವೇಲ್, ನಾನು, ಶಾಸಕ ವೇದವ್ಯಾಸ್ ಸ್ಥಳದಲ್ಲಿದ್ದೆವು. ಅಲ್ಲಿ ಡಿಡಿಪಿಐ ಕೂಡ ಇದ್ದರು. ಪೋಷಕರ ಬೇಡಿಕೆ ಆಧರಿಸಿ ಶಿಕ್ಷಕರ ವಿರುದ್ಧ ತನಿಖೆಗೆ ಆದೇಶಿಸಲಾಯಿತು. ನಾನು ಅಲ್ಲಿಂದ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಲು ಬೆಂಗಳೂರಿಗೆ ಪ್ರಯಾಣ ಮಾಡಿದ್ದೇನೆ. ನಂತರದ ಘಟನೆಗೆ ಸಂಬಂಧಪಟ್ಟಂತೆ ದೂರು ನೀಡಲಾಗಿದೆ. ಸ್ಥಳದಲ್ಲಿ ಇಲ್ಲದ ನನ್ನ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಅದೇ ಕೋಮುವಾದಿ ಮಾತುಗಳನ್ನಾಡಿರುವ ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಶಿಕ್ಷಕರ ಲೋಪವಿಲ್ಲ ಎಂದಾದರೆ, ಶಾಲಾ ಆಡಳಿತ ಮಂಡಳಿ ಶಿಕ್ಷಕರನ್ನು ಅಮಾನತುಗೊಳಿಸಿದ್ದು ಏಕೆ ಎಂದು ಪ್ರಶ್ನಿಸಿದರು.

ರಾಮ ಮಂದಿರಕ್ಕೆ 11ರೂ. ಕೋಟಿ ದೇಣಿಗೆ ನೀಡಿದ್ದ ಉದ್ಯಮಿಗೆ ರಾಜ್ಯಸಭಾ ಟಿಕೆಟ್

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ದಿನೇಶ್ ಗುಂಡೂರಾವ್, ಎಫ್‍ಐಆರ್ ಹಾಕಿದಾಕ್ಷಣ ಯಾರೂ ಅಪರಾಯಾಗುವುದಿಲ್ಲ. ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ಸರ್ಕಾರದಿಂದ ಸೂಚನೆಗಳನ್ನು ನೀಡಲಾಗಿಲ್ಲ. ಮಂಗಳೂರಿನಲ್ಲಿ ಬಹಳ ಕೆಟ್ಟ ಪರಿಸ್ಥಿತಿಯನ್ನು ಸೃಷ್ಟಿಸಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೋಮುವಾದ ಕೆರಳಿಸುವುದಷ್ಟೆ ಇವರ ಉದ್ದೇಶ ಎಂದು ಆಕ್ಷೇಪಿಸಿದರು. ಈ ಹಂತದಲ್ಲಿ ಬಿಜೆಪಿ ಸದಸ್ಯರು ಪ್ರತಿರೋಧ ವ್ಯಕ್ತಪಡಿಸಿ ಗದ್ದಲ ಎಬ್ಬಿಸಿದರು. ಸಚಿವ ಕೃಷ್ಣ ಭೈರೇಗೌಡ ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪವಾಗಿದೆ. ಗೃಹಸಚಿವರಿಂದ ಉತ್ತರ ಕೊಡಿಸುತ್ತೇವೆ. ಇಲ್ಲಿ ಚರ್ಚೆ ಬೇಡ ಎಂದು ಹೇಳಿದರು. ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್, ಬರೀ ಉತ್ತರ ಸಾಲುವುದಿಲ್ಲ. ಈ ವಿಚಾರ ಚರ್ಚೆಯಾಗಬೇಕು ಎಂದರು.

ಬಿಜೆಪಿ ಸಲಹೆ ಮೇರೆಗೆ ಕುಪೇಂದ್ರ ರೆಡ್ಡಿ ಕಣಕ್ಕೆ : ಹೆಚ್ಡಿಕೆ

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತು ಶಾಸಕ ಸುನಿಲ್‍ಕುಮಾರ್ ಅವರು ದೂರು ಕೊಟ್ಟಾಕ್ಷಣಕ್ಕೆ ಯಾರು ಯಾರ ವಿರುದ್ಧವಾದರೂ ಎಫ್‍ಐಆರ್ ದಾಖಲಿಸಬಹುದೇ ಎಂದು ಆಕ್ಷೇಪಿಸಿದರು. ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಶಾಸಕರ ವಿರುದ್ಧ ಎಫ್‍ಐಆರ್ ದಾಖಲಿಸಿದೆ ಎಂದು ಆರೋಪಿಸಿದರು. ಗೃಹಸಚಿವರ ಉತ್ತರದ ಬಳಿಕ ಉಳಿದ ವಿಚಾರ ಪ್ರಸ್ತಾಪ ಮಾಡುವುದು ಸೂಕ್ತ ಎಂದು ಸಭಾಧ್ಯಕ್ಷರು ಚರ್ಚೆಗೆ ತೆರೆ ಎಳೆದರು.

RELATED ARTICLES

Latest News