ಇಂಡಿಕಾ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾದ ದುಷ್ಕರ್ಮಿಗಳು
ಈ ಸುದ್ದಿಯನ್ನು ಶೇರ್ ಮಾಡಿ
ಮಳವಳ್ಳಿ, ಏ.15- ತಾಲ್ಲೂಕಿನ ಬೆನಮನಹಳ್ಳಿ ಗ್ರಾಮದ ಬಳಿ ಇಂಡಿಕಾ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.ಬಿಳಿ ಬಣ್ಣದ ಇಂಡಿಕಾ ಕಾರನ್ನು ಯಾರೋ ಅಪರಿಚಿತರು ತೆಗೆದುಕೊಂಡು ಬಂದು ಕಾರಿಗೆ ಬೆಂಕಿ ಹಾಕಿ ಪರಾರಿಯಾಗಿದ್ದಾರೆ. ಕಾರು ಸಂಪೂರ್ಣ ಭಸ್ಮವಾಗಿದ್ದು, ಕಾರಿನಲ್ಲಿ ಇದ್ದ ನಂಬರ್ ಪ್ಲೇಟು ಸಹ ಬೆಂಕಿಗೆ ಬೆಂದಿರುವುದರಿಂದ ನಂಬರು ಸಹ ತಿಳಿದು ಬಂದಿರುವುದಿಲ್ಲ. ಕಾರು ಯಾರದು. ಕಾರಿಗೆ ಬೆಂಕಿ ಹಚ್ಚಿದವರು ಯಾರು. ಯಾವ ಉದ್ದೇಶಕ್ಕೆ ಬೆಂಕಿ ಹಚ್ಚಲಾಗಿದೆ ಎಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಗ್ರಾಮಸ್ಥರು ವಿಷಯ ತಿಳಿಸಿದ ಮೇರೆಗೆ ಹಲಗೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕಾರನ್ನು ತಮ್ಮ ವಶಕ್ಕೆ ತೆಗೆದುಕೊಂಡು ಪರಿಶೀಲಿಸಿ ತನಿಖೆ ಕೈಗೊಂಡಿರುತ್ತಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments