ಗದಗ ಜಿಲ್ಲಾಸ್ಪತ್ರೆಯಲ್ಲೇ ಆಸ್ಪತ್ರೆಯಲ್ಲಿ ಯುವಕ ಆತ್ಮಹತ್ಯೆ
ಈ ಸುದ್ದಿಯನ್ನು ಶೇರ್ ಮಾಡಿ
ಗದಗ, ಮೇ 22- ಅನಾರೋಗ್ಯದಿಂದ ಬೇಸತ್ತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಯಲಬುರಗ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ಜಗದೀಶ್ (26) ಆತ್ಮಹತ್ಯೆಗೆ ಶರಣಾದ ಯುವಕ. ತೀವ್ರ ಅನಾರೋಗ್ಯದಿಂದ ಗದಗ ಜಿಲ್ಲಾಸ್ಪತ್ರೆಯಲ್ಲಿ 20 ದಿನಗಳಿಂದ ಚಿಕಿತ್ಸೆಗೆ ದಾಖಲಾಗಿದ್ದರೂ ಚೇತರಿಕೆ ಕಂಡುಬಾರದ್ದರಿಂದ ನೊಂದ ಜಗದೀಶ್ ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ರಾತ್ರಿ ಪಾಳಿಯ ಸಿಬ್ಬಂದಿ ಕರ್ತವ್ಯದಲ್ಲಿದ್ದರೂ ಆಸ್ಪತ್ರೆಯಲ್ಲೇ ಈತ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಾರದಿರುವುದು ದುರ್ದೈವ.
ಈ ಸಂಬಂಧ ಗದಗ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments