ನಡುರಸ್ತೆಯಲ್ಲೇ ಹೊತ್ತಿ ಉರಿದ ಇಂಡಿಕಾ ಕಾರು
ಈ ಸುದ್ದಿಯನ್ನು ಶೇರ್ ಮಾಡಿ
ವಿಜಯಪುರ, ಏ.15- ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಬಿದ್ದು ಅದರೊಳಗಿದ್ದ ಪ್ರಯಾಣಿಕರು ಅಚ್ಚರಿ ರೀತಿಯಲ್ಲಿ ಪಾರಾಗಿರುವ ಘಟನೆ ತಾಲ್ಲೂಕಿನ ಹಡಗಲಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ. ವಿಜಯಪುರ ನಿವಾಸಿ ಸುರೇಶ ಶಿವಣಗಿ ಅವರು ತಮ್ಮ ಇಂಡಿಕಾ ಕಾರಿನಲ್ಲಿ ನಿನ್ನೆ ರಾತ್ರಿ ಬಿಜಾಪುರಕ್ಕೆ ತೆರಳಿ ವಾಪಾಸ್ ಬರುವಾಗ ಮಾರ್ಗಮಧ್ಯೆ ಬೆಂಕಿ ಕಾಣಿಸಿಕೊಂಡಿದೆ. ದಟ್ಟ ಹೊಗೆ ಬಂದ ಹಿನ್ನೆಲೆಯಲ್ಲಿ ಕಾರಿನಿಂದ ಹೊರಬಂದು ನೋಡಿದಾಗ ಚಕ್ರ ಹಾಗೂ ಇಂಜಿನ್ ಭಾಗದಲ್ಲಿ ಬೆಂಕಿ ಹೊತ್ತಿರುವುದನ್ನು ನೋಡಿ ಆತಂಕದಲ್ಲೇ ಅದನ್ನು ನಂದಿಸಲು ಪ್ರಯತ್ನಸಿದ್ದಾರೆ. ಆದರೆ ಅದು ಸಾಧ್ಯವಾಗಿಲ್ಲ.
ಕಾರು ಸಂಪೂರ್ಣ ಸುಟ್ಟುಹೋಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಂಇಣ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments