ಮಹಿಳೆಯ 40 ಗ್ರಾಂ ಚಿನ್ನದ ಸರ ಅಪಹರಣ
ಈ ಸುದ್ದಿಯನ್ನು ಶೇರ್ ಮಾಡಿ
ಮಂಡ್ಯ, ಫೆ.16- ಮಹಿಳೆಯ ಗಮನ ಬೇರೆಡೆ ಸೆಳೆದು ಇಬ್ಬರು ದುಷ್ಕರ್ಮಿಗಳು 40 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಶ್ರೀರಂಗಪಟ್ಟಣ ತಾಲೂಕಿನ ಶ್ರೀನಿವಾಸ ಅಗ್ರಹಾರ ಗ್ರಾಮದ ನಿವಾಸಿ ಗೌರಮ್ಮ (65) ಚಿನ್ನದ ಸರ ಕಳೆದುಕೊಂಡ ಮಹಿಳೆ.ಗೌರಮ್ಮ ವೆಂಕಟರಮಣಸ್ವಾಮಿ ಜಾತ್ರೆ ನಿಮಿತ್ತ ಕರಿಘಟ್ಟ ಗ್ರಾಮಕ್ಕೆ ತೆರಳಿದ್ದರು. ಜಾತ್ರೆಯ ಅಪಾರ ಜನಸಮೂಹದ ನಡುವೆ ಇಬ್ಬರು ದುಷ್ಕರ್ಮಿಗಳು ಆಕೆಯ ಗಮನ ಬೇರೆಡೆ ಸೆಳೆದು40 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments