ವಿಡಿಯೋ ಮಾಡಿ, ನಂತರ 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ಮುಂಬೈ, ಏ.4-ಬೆಂಗಳೂರು ಮಾದಕ ವಸ್ತು ವ್ಯಸನಿ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ 19ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನ ಬಾಂದ್ರಾದ ಪಂಚತಾರಾ ಹೋಟೆಲ್ನಲ್ಲಿ ನಡೆದಿದೆ. ಅರ್ಜುನ್ ಭಾರದ್ವಾಜ್(24) ಆತ್ಮಹತ್ಯೆ ಮಾಡಿಕೊಂಡ ಯುವಕ. ಮುಂಬೈನ ಸಬ್ಅರ್ಬನ್ ವಿಲೆ ಪಾರ್ಲೆಯ ಕಾಲೇಜೊಂದರಲ್ಲಿ ಈತ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಟಾರ್ ಹೋಟೆಲ್ನ 19ನೇ ಮಹಡಿಯ ಕೊಠಡಿಯಲ್ಲಿ ರೂಮ್ ಒಂದನ್ನು ಬಾಡಿಗೆಗೆ ಪಡೆದಿದ್ದ ಯುವಕ, ನಿನ್ನೆ ರಾತ್ರಿ ಕಿಟಿಕಿಯ ಗಾಜನ್ನು ಒಡೆದು ಕೆಳಗೆ ಹಾರಿ ಸಾವಿಗೆ ಶರಣಾಗಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ತನ್ನ ಹೇಳಿಕೆಯನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ನಾನೊಬ್ಬ ಮಾದಕ ವ್ಯಸನಿ. ನಾನು ಇನ್ನು ಮುಂದೆ ಬದುಕಿರಬಾರದು. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಆತ ಸೂಸೈಡ್ ನೋಟ್ ಬರೆದಿಟ್ಟಿದ್ದಾನೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS