ವಿದ್ಯುತ್ ತಂತಿ ಸ್ಪರ್ಶ : ಬಾಲಕ ಸಾವು
ಈ ಸುದ್ದಿಯನ್ನು ಶೇರ್ ಮಾಡಿ
ಕೋಲಾರ, ಸೆ.2- ವಿದ್ಯುತ್ ತಂತಿ ತಗುಲಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಬಂಗಾರಪೇಟೆ ತಾಲೂಕಿನ ರಾಮನಾಯಕನಹಳ್ಳಿ ಬಳಿ ನಡೆದಿದೆ.ಮೃತ ಬಾಲಕನನ್ನು ಹರ್ಷಿತ್ (7) ಎಂದು ಗುರುತಿಸಲಾಗಿದೆ.ಕಳೆದ ಹಲವು ದಿನಗಳ ಹಿಂದೆ ಗಾಳಿ-ಮಳೆಯಿಂದಾಗಿ ವಿದ್ಯುತ್ ಕಂಬಗಳಿಂದ ತಂತಿಗಳು ತುಂಡಾಗಿ ಬಿದ್ದಿದ್ದು, ಅದನ್ನು ಸರಿಪಡಿಸುವಂತೆ ಬೆಸ್ಕಾಂ ಇಲಾಖೆಗೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿದ್ದರು. ಆದರೆ, ಅದನ್ನು ನಿರ್ಲಕ್ಷಿಸಲಾಗಿತ್ತು. ನಿನ್ನೆ ಸಂಜೆ ಆಟವಾಡಲು ಹೋಗಿದ್ದ ಬಾಲಕ ತುಂಡಾಗಿ ಬಿದ್ದಿದ್ದ ತಂತಿ ಕಾಣದೆ ತುಳಿದಿದ್ದರಿಂದ ವಿದ್ಯುತ್ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಬಂಗಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ವೇಳೆ ಗ್ರಾಮಸ್ಥರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ
► Follow us on – Facebook / Twitter / Google+
Facebook Comments