ಸಚಿವೆ ಸ್ಮೃತಿ ಇರಾನಿ ಕಾರ್ ಚೇಸ್ ಮಾಡಿ ಬಂಧನಕ್ಕೊಳಗಾಗಿದ್ದ ಯುವಕರಿಗೆ ಜಾಮೀನು
ಈ ಸುದ್ದಿಯನ್ನು ಶೇರ್ ಮಾಡಿ
ನವದೆಹಲಿ, ಏ.2- ಕೇಂದ್ರ ಜವಳಿ ಸ್ಮೃತಿ ಇರಾನಿ ಅವರನ್ನು ಹಿಂಬಾಲಿಸಿದ ಆರೋಪದಲ್ಲಿ ಪೊಲೀಸರ ವಶದಲ್ಲಿದ್ದ ನಾಲ್ವರು ಕಾಲೇಜು ವಿದ್ಯಾರ್ಥಿಗಳಿಗೆ ಜಾಮೀನು ನೀಡಲಾಗಿದೆ. ವಿಮಾನ ನಿಲ್ದಾಣದಿಂದ ಮನೆಗೆ ತೆರಳುತ್ತಿದ್ದ ಸ್ಮೃತಿಇರಾನಿ ಕಾರನ್ನು ಚೇಸ್ ಮಾಡಲು ಯತ್ನಿಸಿದರಲ್ಲದೆ, ಅವರನ್ನೇ ಹಿಂಬಾಲಿಸುತ್ತಿದ್ದರು ಎಂದು ಸಚಿವೆ ಸ್ಮೃತಿ ಇರಾನಿ ಪೊಲೀಸ್ ನಿಯಂತ್ರಣ ಕೊಠಡಿಗೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ನಂತರ ಚಾಣುಕ್ಯಪುರಿ ಪೊಲೀಸ್ ಠಾಣೆಗೆ ಹೋಗಿ ಲಿಖಿತ ದೂರು ಸಲ್ಲಿಸಿದ್ದರು. ನಮ್ಮ ವಿರುದ್ದದ ದೂರಿನಲ್ಲಿ ಸತ್ಯವಿಲ್ಲ. ನಾವು ಜನ್ಮದಿನದ ಪಾರ್ಟಿ ಮುಗಿಸಿ ಬರುತ್ತಿದ್ದೆವು ಎಂದು ಯುವಕರು ಹೇಳಿಕೆ ನೀಡಿದ್ದಾರೆ. ಇಂದು ಬೆಳಗ್ಗೆ ಈ ನಾಲ್ವರು ಯುವಕರಿಗೆ ಜಾಮೀನು ನೀಡಿ ಬಿಡುಗಡೆಗೊಳಿಸಲಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments