2 ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 41ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ
ತುಮಕೂರು, ಮೇ 26- ಜಾನುವಾರುಗಳನ್ನು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಡೆದ ಕನ್ನಡಪರ ಸಂಘಟನೆ ಕಾರ್ಯಕರ್ತರು 41ಕ್ಕೂ ಹೆಚ್ಚು ಹಸುಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಬೆಂಗಳೂರು ಕಡೆಯಿಂದ ವೇಗವಾಗಿ ಬರುತ್ತಿದ್ದ ಲಾರಿ ಬೈಕ್ವೊಂದಕ್ಕೆ ಡಿಕ್ಕಿ ಹೊಡೆಯುವುದರಲ್ಲಿತ್ತು. ಇದರಿಂದ ಆಕ್ರೋಶಗೊಂಡ ಸವಾರ ಲಾರಿ ತಡೆದು ಗಲಾಟೆಗಿಳಿದಿದ್ದಾನೆ. ಆಗ ಲಾರಿಯಲ್ಲಿ ಹಸುಗಳಿರುವುದು ಗೊತ್ತಾಗಿದೆ.
ಚಾಲಕ ಕೂಡಲೇ ಲಾರಿ ಸಮೇತ ಪರಾರಿಯಾಗಲು ಕ್ಯಾತ್ಸಂದ್ರ ಕಡೆ ಹೊರಟಿದ್ದಾನೆ. ಅಷ್ಟರಲ್ಲಿ ವಿಷಯ ತಿಳಿದ ಕನ್ನಡಪರ ಸಂಘಟನೆಯವರು, ಸಾರ್ವಜನಿಕರು ಸೇರಿ ಲಾರಿಯನ್ನು ತಡೆದಿದ್ದಾರೆ. ಚಾಲಕರು ಟೋಲ್ ಬಳಿ ಲಾರಿ ಬಿಟ್ಟು ಪರಾರಿಯಾಗಿದ್ದಾರೆ. 40ಕ್ಕೂ ಹೆಚ್ಚು ಹಸುಗಳನ್ನು ಬೆಂಗಳೂರಿನಿಂದ ಬೆಳಗಾವಿಗೆ ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿರುವುದು ಪೊಲೀಸರ ತಪಾಸಣೆಯಿಂದ ತಿಳಿದುಬಂದಿದೆ. ಚಾಲಕ ಪರಾರಿಯಾಗಿದ್ದು, ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS