Friday, April 19, 2024
Homeರಾಷ್ಟ್ರೀಯರಾಹುಲ್ ಗಾಂಧಿಗೆ ಹೈದರಾಬಾದ್‍ನಲ್ಲಿ ಸ್ಪರ್ಧಿಸುವಂತೆ ಓವೈಸಿ ಚಾಲೆಂಜ್

ರಾಹುಲ್ ಗಾಂಧಿಗೆ ಹೈದರಾಬಾದ್‍ನಲ್ಲಿ ಸ್ಪರ್ಧಿಸುವಂತೆ ಓವೈಸಿ ಚಾಲೆಂಜ್

ಹೈದರಾಬಾದ್,ಸೆ.25- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ವಯನಾಡು ಮಾತ್ರವಲ್ಲದೆ ಹೈದರಾಬಾದ್‍ನಲ್ಲೂ ಸ್ರ್ಪಧಿಸುವಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ.

ಹೈದರಾಬಾದ್‍ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯನ್ನು ದೇಶದ ಅತ್ಯಂತ ಹಳೆಯ ಪಕ್ಷವೇ ನೆಲಸಮಗೊಳಿಸಲು ಕಾರಣ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡ ಕೆನಡಾ ಪ್ರಧಾನಿ ಟ್ರುಡೊ
ನಾನು ನಿಮ್ಮ ನಾಯಕನಿಗೆ (ರಾಹುಲ್ ಗಾಂಧಿ) ಹೈದರಾಬಾದ್‍ನಿಂದ ಚುನಾವಣೆಗೆ ಸ್ರ್ಪಧಿಸುವಂತೆ ಆಹ್ವಾನ ಕೊಡುತ್ತೇನೆ. ಅವರು ವಯನಾಡು ಮಾತ್ರವಲ್ಲದೆ ಇಲ್ಲಿಂದಲೂ ಸ್ಪರ್ಧೆ ಮಾಡಲಿ. ಇತ್ತೀಚೆಗೆ ಅವರು ತುಂಬ ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ. ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಬಾಬರಿ ಮಸೀದಿ ನೆಲಸಮವಾಗಲು ಯಾರೂ ಕಾರಣ ಎಂದು ಪ್ರಶ್ನಿಸಿದರು.

ತೆಲಂಗಾಣದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಚುಕ್ಕಾಣಿ ಹಿಡಿಯಲು ಎರಡೂ ಪಕ್ಷಗಳು ಹವಣಿಸುತ್ತಿರುವುದರಿಂದ ಕಾಂಗ್ರೆಸ್ ಮತ್ತು ಎಐಎಂಐಎಂ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ.

ಈ ತಿಂಗಳ ಆರಂಭದಲ್ಲಿ ತೆಲಂಗಾಣದ ತುಕ್ಕುಗುಡದಲ್ಲಿ ನಡೆದ ವಿಜಯಭೇರಿ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ತೆಲಂಗಾಣದಲ್ಲಿ ಭಾರತೀಯ ಜನತಾ ಪಕ್ಷ, ಭಾರತ್ ರಾಷ್ಟ್ರ ಸಮಿತಿ ಮತ್ತು ಎಐಎಂಐಎಂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿವೆ ಮತ್ತು ತಮ್ಮ ಪಕ್ಷವು ಈ ತ್ರಿಕೂಟದ ವಿರುದ್ಧ ಹೋರಾಡುತ್ತಿದೆ ಎಂದು ಹೇಳಿದ್ದರು.

ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು ಬಿಆರ್‍ಎಸ್ ವಿರುದ್ಧ ಹೋರಾಡುತ್ತಿಲ್ಲ ಆದರೆ ಬಿಆರ್‍ಎಸ್, ಬಿಜೆಪಿ ಮತ್ತು ಎಐಎಂಐಎಂ ಜೊತೆಗೂಡಿ ಹೋರಾಡುತ್ತಿದೆ, ಅವರು ತಮ್ಮನ್ನು ಬೇರೆ ಬೇರೆ ಪಕ್ಷಗಳೆಂದು ಕರೆದುಕೊಳ್ಳುತ್ತಾರೆ ಆದರೆ ಅವರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅಥವಾ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಯಾವುದೇ ಸಿಬಿಐ-ಇಡಿ ಪ್ರಕರಣಗಳಿಲ್ಲ ಎಂದು ವಯನಾಡ್ ಸಂಸದರು ಹೇಳಿದ್ದರು, ಏಕೆಂದರೆ ಪ್ರಧಾನಿ ನರೇಂದ್ರಮೋದಿ ಅವರನ್ನು ತಮ್ಮ ಸ್ವಂತ ಜನರು ಎಂದು ಪರಿಗಣಿಸಿದ್ದಾರೆ.

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಎಲ್ಲಾ ರಾಜಕೀಯ ಪಕ್ಷಗಳು ಯಾವುದೇ ಕಲ್ಲನ್ನು ಬಿಡುತ್ತಿಲ್ಲ. ಆಡಳಿತಾರೂಢ ಬಿಆರ್‍ಎಸ್ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ, ಆದರೆ ಕಾಂಗ್ರೆಸ್ ತನ್ನ ಆರು ಭರವಸೆಗಳನ್ನು ಘೋಷಿಸಿದೆ, ಅವರು ಅಧಿಕಾರಕ್ಕೆ ಬಂದರೆ ಅದನ್ನು ಈಡೇರಿಸಲಾಗುವುದು ಎಂದು ಪಕ್ಷ ಹೇಳುತ್ತದೆ.

RELATED ARTICLES

Latest News