Friday, April 26, 2024
Homeರಾಜ್ಯಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ

ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ : ಅಶೋಕ್ ಆಕ್ಷೇಪ

ಬೆಂಗಳೂರು,ಫೆ.22- ಸದನದಲ್ಲಿ ಸಚಿವರು, ಅಧಿಕಾರಿಗಳು ಹಾಜರಿಲ್ಲ. ಹೀಗಾದರೆ ಸದನ ಏಕೆ ನಡೆಸಬೇಕು ಎಂದು ವಿರೋಧಪಕ್ಷದ ನಾಯಕ ಆರ್.ಅಶೋಕ್ ತೀವ್ರ ಆಕ್ಷೇಪವನ್ನು ವಿಧಾನಸಭೆಯಲ್ಲಿಂದು ವ್ಯಕ್ತಪಡಿಸಿದರು. ಇಂದು ಬೆಳಿಗ್ಗೆ ಸದನ ಸಮಾವೇಶಗೊಂಡಾಗ ಅಶೋಕ್‍ರವರು ಆಡಳಿತ ಪಕ್ಷದ ಮುಂದಿನ ಎರಡೂ ಸಾಲುಗಳು ಖಾಲಿ ಇವೆ. ಮಂತ್ರಿಗಳಿಲ್ಲ, ಅಧಿಕಾರಿಗಳೂ ಇಲ್ಲ. ಹೀಗಾದರೆ ಏಕೆ ಅಧಿವೇಶನ ನಡೆಸಬೇಕು, ನಮಗೂ ಕಾರ್ಯಕ್ರಮಗಳಿವೆ, ಪ್ರವಾಸ ಹೋಗಬೇಕಿತ್ತು. ಅಧಿವೇಶನ ಮುಖ್ಯವಲ್ಲವೇ ಎಂದು ತರಾಟೆಗೆ ತೆಗೆದುಕೊಂಡರು.

ಸರ್ಕಾರಕ್ಕೆ ಮಾನ ಮರ್ಯಾದೆ ಇದೆಯೇ? ಅವರದೇ ಆದ ಅಜೆಂಡಾ ಹಮ್ಮಿಕೊಂಡಿದ್ದಾರೆ. ನಮಗೆಲ್ಲಾ ಜ್ವರ, ನೆಗಡಿ, ತಲೆನೋವು, ಗಂಟಲುನೋವು, ಕಣ್ಣಿನ ಸೋಂಕು ಉಂಟಾಗಿದೆ. ಪ್ರತಿದಿನ 7 ಗಂಟೆ ಅಧಿವೇಶನದಲ್ಲಿ ಕೂರುತ್ತಿದ್ದೇವೆ. 8 ಗಂಟೆ ಅಧಿವೇಶನ ನಡೆಸಲು ನಮಗೇನು ತಕರಾರಿಲ್ಲ. ಸಮಯಕ್ಕೆ ಸರಿಯಾಗಿ ಸಚಿವರು ಬರಬೇಕಲ್ಲವೇ? ನಿರಂತರವಾಗಿ ಎಸಿಯಲ್ಲಿ ಕೂರುವುದರಿಂದರ ಆರೋಗ್ಯವೂ ಹದಗೆಡುತ್ತಿದೆ ಎಂದರು. ಆಗ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ್, ನನಗೂ ಆರೋಗ್ಯ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಉಂಟಾಗಿದೆ ಎಂದು ಹೇಳಿದರು.

ಪಿಯುಸಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ದಿನಾಂಕ ಪ್ರಕಟ

ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, ಬಜೆಟ್ ಮೇಲಿನ ಚರ್ಚೆ ನಡೆಯುವಾಗ ಮಂತ್ರಿಗಳಿರಬೇಕಲ್ಲವೇ? ಸಾಲಿನಲ್ಲಿ ಮಂತ್ರಿಗಳ್ಯಾರು ಇಲ್ಲ ಎಂದರೆ ಹೇಗೆ. ಇಂದು ವಿಧಾನಸೌಧದಲ್ಲಿ ಸರ್ಕಾರದ ಕಾರ್ಯಕ್ರಮ ಇರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಲ್ಲಿದ್ದಾರೆ. ತದನಂತರ ಸದನಕ್ಕೆ ಆಗಮಿಸುತ್ತಾರೆ. ಕಲಾಪ ಆರಂಭಿಸೋಣ ಎಂದರು. ಆಗಲೂ ವಿರೋಧ ಪಕ್ಷದವರು ಆಕ್ಷೇಪ ವ್ಯಕ್ತಪಡಿಸಿದಾಗ ಸಭಾಧ್ಯಕ್ಷರು ಸರಿಯಾದ ಸಮಯಕ್ಕೆ ಶಾಸಕರು, ಸಚಿವರು ಆಗಮಿಸಿ ಸದನದಲ್ಲಿರಬೇಕು, ಇದು ನಮಗೆ ಕೊಡುವ ಗೌರವವಲ್ಲ, ನಾಡಿನ ಜನತೆಗೆ ಕೊಡುವ ಗೌರವ ಎಂದರು.

ವಿರೋಧಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಅಧಿವೇಶನದ ನಡೆಯುವಾಗ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಾರದಲ್ಲವೇ? ಎಂದರು ಆಗ ಸಭಾಧ್ಯಕ್ಷರು ಸಂಪ್ರದಾಯ ತಪ್ಪಿಸಲಾಗದು, ಎಲ್ಲಾ ರೋಗಕ್ಕೂ ಮದ್ದಿದೆ. ಟೆನ್ಶನ್‍ಗೆ ಮದ್ದಿಲ್ಲ ಎಂದು ಹೇಳಿ ಮುಂದಿನ ಕಾರ್ಯಕಲಾಪಕ್ಕೆ ಅನುವು ಮಾಡಿಕೊಟ್ಟರು.

RELATED ARTICLES

Latest News