Friday, March 29, 2024
Homeಜಿಲ್ಲಾ ಸುದ್ದಿಗಳುಹೆಜ್ಜೇನು ದಾಳಿಯಿಂದ ರೈತ ಸಾವು

ಹೆಜ್ಜೇನು ದಾಳಿಯಿಂದ ರೈತ ಸಾವು

ಹಾಸನ,ಮಾ.12- ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ದಾಳಿ ಮಾಡಿದ ಪರಿಣಾಮ ರೈತನೋರ್ವ ಸಾವನ್ನಪ್ಪಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ದರಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.ಆನಂದ(45) ಮೃತಪಟ್ಟ ರೈತ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಹೆಜ್ಜೇನು ದಾಳಿ ಮಾಡಿದ್ದು, ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ಜೇನುಹುಳು ಕಡಿತದಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆನಂದ್‍ರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಸುದ್ದಿ ತಿಳಿಯುತ್ತಿದ್ದಂತೆ ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News