Wednesday, April 24, 2024
Homeರಾಜಕೀಯರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿ : ಗೌತಮ್ ಗಂಭೀರ್

ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿ : ಗೌತಮ್ ಗಂಭೀರ್

ನವದೆಹಲಿ,ಮಾ.2-ಕ್ರಿಕೆಟ್‍ನತ್ತ ಗಮನ ಹರಿಸಬೇಕಾಗಿರುವ ಹಿನ್ನಲೆಯಲ್ಲಿ ತಮ್ಮನ್ನು ರಾಜಕೀಯ ಕರ್ತವ್ಯಗಳಿಂದ ಮುಕ್ತಗೊಳಿಸುವಂತೆ ಸಂಸದ ಗೌತಮ್ ಗಂಭೀರ್ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ಕೋರಿಕೊಂಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪ್ರಮುಖ ಕಟು ಟೀಕೆಕಾರರಲ್ಲಿ ಒಬ್ಬರಾಗಿದ್ದ ಗೌತಮ್ ಗಂಭೀರ್, ಕಳೆದ ಲೋಕಸಭಾ ಚುನಾವಣೆಯಲ್ಲಿ ಪೂರ್ವ ದೆಹಲಿಯ ಕ್ಷೇತ್ರದಿಂದ ಸ್ಪರ್ಧೆ ಮಾಡಿ ವಿಜೇತರಾಗಿದ್ದರು. ನನ್ನ ರಾಜಕೀಯ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ನಾನು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಜೀ ಅವರಿಗೆ ಮನವಿ ಮಾಡಿದ್ದೇನೆ, ಇದರಿಂದಾಗಿ ನನ್ನ ಮುಂಬರುವ ಕ್ರಿಕೆಟ್ ಬದ್ಧತೆಗಳ ಮೇಲೆ ನಾನು ಗಮನಹರಿಸಬಹುದು.

ನನಗೆ ಜನರ ಸೇವೆ ಮಾಡಲು ಅವಕಾಶ ಒದಗಿಸಿದ ಗೌರವಾನ್ವಿತ ಪ್ರಧಾನಿ ನರೇಂದ್ರಮೋದಿ.ಜಿ ಮತ್ತು ಗೃಹಸಚಿವ ಅಮಿತ್ ಶಾ ಅವರಿಗೆ ಧನ್ಯವಾದಗಳು. ಜೈ ಹಿಂದ್!, ಎಂದು ಗಂಭೀರ್ ತಮ್ಮ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

RELATED ARTICLES

Latest News