Friday, April 26, 2024
Homeಬೆಂಗಳೂರುಡೋರ್ ಲಾಕ್ ಒಡೆದು ಚಿನ್ನಾಭರಣ ಲೂಟಿ, ಇಬ್ಬರು ನೇಪಾಳದ ಸೆಕ್ಯೂರಿಟಿ ಗಾರ್ಡ್ ಬಂಧನ

ಡೋರ್ ಲಾಕ್ ಒಡೆದು ಚಿನ್ನಾಭರಣ ಲೂಟಿ, ಇಬ್ಬರು ನೇಪಾಳದ ಸೆಕ್ಯೂರಿಟಿ ಗಾರ್ಡ್ ಬಂಧನ

ಬೆಂಗಳೂರು, ಅ.9- ಕಬ್ಬಿಣದ ರಾಡಿನಿಂದ ಮನೆಯ ಡೋರ್ ಲಾಕ್ ಒಡೆದು ಒಳನುಗ್ಗಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಇಬ್ಬರು ನೇಪಾಳಿಗರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿ 10.3 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಹಾಗೂ ಬೆಳ್ಳಿ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಇಬ್ಬರು ಆರೋಪಿಗಳು ನಗರದಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದು, ಬೀಗ ಹಾಕಿದ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದರು. ಹೆಸರಘಟ್ಟ, ದಾಸೇನಹಳ್ಳಿ ಕ್ರಾಸ್‍ನ ನಿವಾಸಿಯೊಬ್ಬರು ಜು.16 ಮತ್ತು 17ರಂದು ತಮ್ಮ ಸ್ವಂತ ಊರಿಗೆ ಹೋಗಿದ್ದು, ವಾಪಸ್ಸು ಬಂದು ನೋಡಿದಾಗ ಮನೆಯ ಡೋರ್ ಲಾಕ್ ಮುರಿದು ಯಾರೋ ಕಳ್ಳರು, ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಹಣ ಕಳ್ಳತನ ಮಾಡಿರುವುದು ಕಂಡುಬಂದಿದೆ.

ಈ ಬಗ್ಗೆ ಅವರು ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಸುಲಭವಾಗಿ ಹಣ ಸಂಪಾದನೆ ಮಾಡಿ, ದುಶ್ಚಟಗಳಿಗೆ ಹಣ ಹೊಂದಿಸಲು ಇಂತಹ ಕೃತ್ಯವೆಸಗಿರುವುದು ಗೊತ್ತಾಗಿದೆ.

ಆಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಶುಭಮನ್‍ ಗಿಲ್ ಅಲಭ್ಯ

ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಸುಮಾರು 10.3 ಲಕ್ಷ ರೂ. ಬೆಲೆ ಬಾಳುವ 121.5 ಗ್ರಾಂ ಚಿನ್ನಾಭರಣ,
3.192 ಕೆ.ಜಿ. ಬೆಳ್ಳಿ ವಸ್ತುಗಳು, 2,020 ರೂ ಹಾಗೂ ಕೃತ್ಯಕ್ಕೆ ಬಳಸಿದ್ದ ಆಕ್ಟಿವಾ ಬೈಕ್, ಒಂದು ಕಬ್ಬಿಣದ ರಾಡ್, ಒಂದು ಸ್ಕ್ರೂ ಡ್ರೈವರ್‍ನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಆರೋಪಿಗಳು ಮೂಲತಃ ನೇಪಾಳ ದೇಶದವರಾಗಿದ್ದು, ಪ್ರಕರಣದ ಮೊದಲನೇ ಆರೋಪಿಯು ಕೆಲವು ವರ್ಷಗಳ ಹಿಂದೆ ಮುಂಬೈಗೆ ಬಂದು ಹೋಟೆಲ್ ಕೆಲಸ ಮಾಡಿಕೊಂಡಿದ್ದನು. ಈತ ಮುಂಬೈನಲ್ಲಿದ್ದಾಗ 5 ಕನ್ನಾ ಕಳವು ಪ್ರಕರಣದಲ್ಲಿ ಭಾಗಿಯಾಗಿ ಜೈಲಿಗೆ ಹೋಗಿ ಬಂದಿರುವುದು ಗೊತ್ತಾಗಿದೆ.

ಈತ ಮತ್ತೊಬ್ಬನ ಸಹಾಯದಿಂದ ಬೆಂಗಳೂರಿಗೆ ಒಂದು ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದು, 2023ನೇ ಸಾಲಿನಲ್ಲಿ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಕನ್ನಾ ಕಳವು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿರುತ್ತಾನೆ.
2ನೇ ಆರೋಪಿಯು 4-5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಸೆಕ್ಯೂರಿಟಿ ಕೆಲಸ ಮಾಡಿಕೊಂಡಿರುತ್ತಾನೆ. ಈ ಇಬ್ಬರು ಆರೋಪಿಗಳು ಸುಲಭವಾಗಿ ಹಣ ಸಂಪಾದನೆ ಮಾಡಿ, ದುಶ್ಚಟಗಳಿಗೆ ಹಣ ಹೊಂದಿಸಲು ಇಂತಹ ಕೃತ್ಯವೆಸಗಿರುವುದು ತನಿಖೆಯಿಂದ ತಿಳಿದು ಬಂದಿರುತ್ತದೆ.

ಆರೋಪಿಗಳ ಬಂಧನದಿಂದ ಪೀಣ್ಯ ಪೊಲೀಸ್ ಠಾಣೆಯ ಒಂದು ಪ್ರಕರಣ, ಸೋಲದೇವನಹಳ್ಳಿ ಪೊಲೀಸ್ ಠಾಣೆಯ 5 ಹಗಲು ಮತ್ತು ರಾತ್ರಿ ಕನ್ನಾ ಕಳವು ಪ್ರಕರಣಗಳು ಸೇರಿದಂತೆ ಒಟ್ಟು 6 ಪ್ರಕರಣಗಳು ಪತ್ತೆಯಾಗಿರುತ್ತವೆ.

ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿರಿಕ್, ಕೊರಿಯರ್ ಬಾಯ್ ಕೊಲೆ

ಉತ್ತರ ವಿಭಾಗದ ಡಿಸಿಪಿ, ಸೈದುಲು ಅಡಾವತ್‍ರವರ ಮಾರ್ಗದರ್ಶನದಲ್ಲಿ ಎ.ಸಿ.ಪಿ. ಮೇರಿ ಶೈಲಜಾ, ಇನ್ಸಪೆಕ್ಟರ್ ಹರಿಯಪ್ಪ ಮತ್ತು ಸಿಬ್ಬಂದಿ ಆರೋಪಿಗಳನ್ನು ಬಂಸಿ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ, ಈ ಉತ್ತಮ ಕಾರ್ಯವನ್ನು ಇಲಾಖೆಯ ಹಿರಿಯ ಪೊಲೀಸ್ ಅಧಿಕಾರಿಗಳು ಶ್ಲಾಘಿಸಿರುತ್ತಾರೆ.

RELATED ARTICLES

Latest News