Friday, April 19, 2024
Homeರಾಜ್ಯಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ

ಸಹಕಾರ ಕ್ಷೇತ್ರದಲ್ಲಿ ಸರ್ಕಾರದ ಹಸ್ತಕ್ಷೇಪ ಸಲ್ಲದು : ಜಿ.ಟಿ.ದೇವೇಗೌಡ

ಬೆಂಗಳೂರು,ಫೆ.20- ಸಹಕಾರ ಸಂಘಗಳಲ್ಲಿ ಸರ್ಕಾರದ ಹಸ್ತಕ್ಷೇಪವು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡರು ಸರ್ಕಾರದ ನಡೆಯನ್ನು ಖಂಡಿಸಿದರು. ಬಜೆಟ್ ಅಧಿವೇಶನದಲ್ಲಿ ಸಹಕಾರ ಸಚಿವರು ಮಂಡಿಸಿದ 2024ನೇ ಸಾಲಿನ ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ಹಾಗೂ ಕರ್ನಾಟಕ ಸೌಹಾರ್ದ ಸಹಕಾರಿ ಕಾಯಿದೆ ಅಡಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರವೇ ಶಾಸಕ ಲಕ್ಷ್ಮಣ ಸವದಿ ಇವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿರುವುದು ಸರಿಯಷ್ಟೆ.

ಈ ಸಮಿತಿಯಲ್ಲಿ ನಾನು ಸೇರಿದಂತೆ ಮಾಜಿ ಸಚಿವ ಎಸ್.ಆರ್. ಪಾಟೀಲ, ಶಾಸಕ ಅರೆಬೈಲ್ ಶಿವರಾಮ್ ಹೆಬ್ಬಾರ್, ಕೆ. ಷಡಾಕ್ಷರಿ, ವಿಧಾನ ಪರಿಷತ್ತಿನ ಸದಸ್ಯ ರಾಜೇಂದ್ರ ರಾಜಣ್ಣ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ., ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ಹೆಚ್.ಎಸ್. ರಮಣರೆಡ್ಡಿ, ಅಪರ ನಿಬಂಧಕರು (ನಿವೃತ್ತ), ಹೆಚ್.ಎಸ್. ನಾಗರಾಜಯ್ಯ, ಅಪರ ನಿಬಂಧಕರು (ನಿವೃತ್ತ) ಇವರುಗಳು ಸದಸ್ಯರಾಗಿರುತ್ತಾರೆ.

ಈ ಸಮಿತಿಯು ಈಗಾಗಲೇ ಹಲವಾರು ಬಾರಿ ಸಭೆಯನ್ನು ನಡೆಸಿ, ತಿದ್ದುಪಡಿಗಳ ಕುರಿತು ಚರ್ಚಿಸಲಾಗಿರುತ್ತದೆ. ಆದರೆ, ಸಮಿತಿಯು ತನ್ನ ವರದಿಯನ್ನು ನೀಡಿರುವುದಿಲ್ಲ. ಪ್ರಸ್ತಾಪಿತ ತಿದ್ದುಪಡಿಗಳು ಸಮಿತಿಯ ಮುಂದೆ ಬಂದಿಲ್ಲದ್ದಿದ್ದರೂ ಸಹಕಾರ ದಿಗ್ಗಜರು, ಸಚಿವರುಗಳಾದ ಹೆಚ್.ಕೆ.ಪಾಟೀಲ್, ರಾಜಣ್ಣ ಹಾಗೂ ಶಿವಾನಂದ ಪಾಟೀಲ್ ನೀವುಗಳು ಮುಖ್ಯಮಂತ್ರಿಗಳ ಮಾತಿಗೆ ಕಟ್ಟುಬಿದ್ದು ಈ ವಿಧೇಯಕವನ್ನು ತರಾತುರಿಯಲ್ಲಿ ತರಲು ಮುಂದಾಗಿರುವುದರ ಹಿಂದೆ ಯಾರ ಪ್ರೇರೇಪಣೆ ಇದೆ ಎಂದು ತಿಳಿದಿದೆ ಎಂದು ಪರೋಕ್ಷವಾಗಿ ಮುಖ್ಯಮಂತ್ರಿಗಳ ವಿರುದ್ಧ ಅಸಮಾಧಾನ ಹೊರಹಾಕಿದರು.

ಬಡತನ, ಹಸಿವು ನಿವಾರಿಸುವ ಯೋಜನೆಗೆ 1 ಮಿಲಿಯನ್ ಡಾಲರ್ ನೇರವು ನೀಡಿದ ಭಾರತ

ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ 7,000 ಕೋಟಿ ರೂ. ಠೇವಣಿ, ಬೆಳಗಾವಿ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ 5,000 ಕೋಟಿ ರೂ., ಬಾಗಲಕೋಟೆ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕಿನಲ್ಲಿ 3,000 ಕೋಟಿ ರೂ.ಗಳಷ್ಟು ಠೇವಣಿ ಇದೆ. ಇದೇ ರೀತಿ ಇತರೆ ಜಿಲ್ಲೆ ಕೇಂದ್ರ ಸಹಕಾರ ಬ್ಯಾಂಕುಗಳಲ್ಲಿ ಕೋಟ್ಯಾಂತರ ರೂ.ಗಳು ಠೇವಣಿ ಇದೆ. ಇಂತಹ ಬ್ಯಾಂಕುಗಳಿಗೆ ಕೇವಲ 10.00 ಲಕ್ಷ ರೂ. ಷೇರು ಬಂಡವಾಳ ನೀಡಿ, ಮೂವರನ್ನು (03) ಸರ್ಕಾರದ ನಾಮನಿರ್ದೇಶನ ಮಾಡಿ, ಸರ್ಕಾರದ ಹಿಡಿತದಲ್ಲಿಟ್ಟುಕೊಂಡು ಸ್ವಾಯತ್ತ ಸಂಸ್ಥೆಗಳನ್ನು ಸರ್ಕಾರದ ಸಂಸ್ಥೆಗಳನ್ನಾಗಿ ಮಾಡಿಕೊಳ್ಳುವುದು ಸರಿಯೇ ಎಂದು ಪ್ರಶ್ನಿಸಿದರು.

ಎಐಎಂಐಎಂ ಪಕ್ಷದ ವಾರಿಸ್ ಪಠಾಣ್ ಬಂಧನ

ಗ್ರಾಮ ಪಂಚಾಯಿತಿ ಸೇರಿದಂತೆ ಪೌರ ಸಂಸ್ಥೆಗಳು ಸರ್ಕಾರದ ಅನುದಾನದಿಂದ ಕಾರ್ಯನಿರ್ವಹಿಸುತ್ತಿವೆ. ಅಲ್ಲಿನ ನೌಕರರು ಸರ್ಕಾರಿ ನೌಕರರಾಗಿರುತ್ತಾರೆ. ಆದರೆ, ಸಹಕಾರ ಸಂಸ್ಥೆಗಳು ಸದಸ್ಯರ ಬಂಡವಾಳದಿಂದ ಕಾರ್ಯ ನಿರ್ವಹಿಸುತ್ತಿದ್ದು, ಇಲ್ಲಿನ ನೌಕರರು, ಸರ್ಕಾರಿ ನೌಕರರು ಆಗಿರುವುದಿಲ್ಲ ಎಂಬ ಅಂಶವನ್ನು ವ್ಯಕ್ತಪಡಿಸಿದ ಅವರು ಸಹಕಾರ ಸಂಸ್ಥೆಗಳನ್ನು ಪೌರ ಸಂಸ್ಥೆಗಳಿಗೆ ಹೋಲಿಕೆ ಮಾಡದೇ, ತಿದ್ದುಪಡಿ ವಿಧೇಯಕವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದರು.

RELATED ARTICLES

Latest News