Thursday, March 28, 2024
Homeರಾಷ್ಟ್ರೀಯಮಸೂದೆಗೆ ಅಂಗೀಕಾರ ನೀಡದ ರಾಜ್ಯಪಾಲರ ವಿರುದ್ಧ ಸುಪ್ರೀಂಗೆ ದೂರು

ಮಸೂದೆಗೆ ಅಂಗೀಕಾರ ನೀಡದ ರಾಜ್ಯಪಾಲರ ವಿರುದ್ಧ ಸುಪ್ರೀಂಗೆ ದೂರು

ನವದೆಹಲಿ,ನ.2- ಸರ್ಕಾರದ ಮಸೂದೆಗಳಿಗೆ ಅಂಗೀಕಾರ ನೀಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಧೋರಣೆ ವಿರುದ್ಧ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ನಮ್ಮ ಸರ್ಕಾರ ಮಂಡಿಸಿರುವ ಎಂಟು ಮಸೂದೆಗಳಿಗೆ ಅಂಗೀಕಾರ ನೀಡುವಂತೆ ರಾಜ್ಯಪಾಲರಿಗೆ ಸೂಚನೆ ನೀಡುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ ನೇತೃತ್ವದ ಸರ್ಕಾರ ಸುಪ್ರೀಂ ಕೋರ್ಟ್‍ಗೆ ಮನವಿ ಮಾಡಿಕೊಂಡಿದೆ.

ತನ್ನ ಅರ್ಜಿಯಲ್ಲಿ ಕೇರಳ ಸರ್ಕಾರವು ರಾಜ್ಯಪಾಲರು ಸಮಂಜಸವಾದ ಸಮಯದಲ್ಲಿ ಮಂಡಿಸಿದ ಪ್ರತಿಯೊಂದು ಮಸೂದೆಯನ್ನು ವಿಲೇವಾರಿ ಮಾಡಲು ಬದ್ಧರಾಗಿದ್ದಾರೆ, ಇದು ಪ್ರಜಾಪ್ರಭುತ್ವ ಪ್ರಕ್ರಿಯೆ ಮತ್ತು ಜನರ ಅಗತ್ಯತೆಗಳನ್ನು ಪರಿಗಣಿಸಿ ಕಲ್ಯಾಣ ಕ್ರಮಗಳು ಮತ್ತು ಸಾರ್ವಜನಿಕ ಹಿತಾಸಕ್ತಿ ಮೇಲೆ ಪರಿಣಾಮ ಬೀರುವ ಇತರ ಕಾನೂನುಗಳನ್ನು ಹೊಂದಿರಬೇಕು.

ಆದರೂ ರಾಜ್ಯಪಾಲರು ತಮ್ಮ ಸಾಂವಿಧಾನಿಕ ಅಕಾರ ಮತ್ತು ಕರ್ತವ್ಯಗಳನ್ನು ಚಲಾಯಿಸುವಲ್ಲಿ ವಿಫಲರಾಗಿದ್ದಾರೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ. ರಾಜ್ಯಪಾಲರ ಬಳಿ ಎಂಟು ಮಸೂದೆಗಳು ಬಾಕಿ ಉಳಿದಿವೆ, ಅವುಗಳಲ್ಲಿ ಮೂರು ಸುಮಾರು ಎರಡು ವರ್ಷಗಳಿಂದ ಅವರ ಮೇಜಿನ ಮೇಲೆ ಮತ್ತು ಮೂರು 12 ತಿಂಗಳುಗಳಿಗಿಂತ ಹೆಚ್ಚು ಕಾಲ ಇವೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತೆಲಂಗಾಣ ಮಹಿಳೆಯರಿಗೆ 4 ಸಾವಿರ ರೂ.ಲಾಭ ; ರಾಹುಲ್

ಬಾಕಿ ಉಳಿದಿರುವ ಬಿಲ್‍ಗಳಲ್ಲಿ ಒಂದು ಎಂದರೆ ಖಾನ್ ಅವರನ್ನು ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆಯಿಂದ ತೆಗೆದುಹಾಕುವುದು. ಈ ಹಿಂದೆ ಆಡಳಿತ ಪಕ್ಷವು ಪಕ್ಷದ ನಾಯಕರ ಕುಟುಂಬದ ಸದಸ್ಯರನ್ನು ಪ್ರಮುಖ ಹುದ್ದೆಗಳಿಗೆ ನೇಮಿಸುತ್ತಿದೆ ಎಂದು ರಾಜ್ಯಪಾಲರು ಆರೋಪಿಸಿದ್ದರು.

RELATED ARTICLES

Latest News