Thursday, April 25, 2024
Homeರಾಜಕೀಯಮುನಿಸಿಕೊಂಡ ಯತ್ನಾಳ್‍ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ..?

ಮುನಿಸಿಕೊಂಡ ಯತ್ನಾಳ್‍ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ..?

ಬೆಂಗಳೂರು,ಡಿ.1- ಪಕ್ಷದ ನಿರ್ಧಾರಕ್ಕೆ ಅಸಮಾಧಾನಗೊಂಡು ಬುಸುಗುಡುತ್ತಿರುವ ಬಿಜೆಪಿಯ ಶಾಶ್ವತ ರೆಬೆಲ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಲಭಿಸುವ ಸಾಧ್ಯತೆಯಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿ ಆರ್.ಅಶೋಕ್ ನೇಮಕ ಮಾಡಿರುವುದಕ್ಕೆ ಯತ್ನಾಳ್ ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕಿದ್ದರು.

ಏಕೆಂದರೆ ಈ ಎರಡು ಸ್ಥಾನಗಳಲ್ಲಿ ಯಾವುದಾದರೂ ಒಂದು ಹುದ್ದೆ ಸಿಕ್ಕೇ ಸಿಗುತ್ತದೆ ಎಂಬ ಅತಿಯಾದ ನಿರೀಕ್ಷೆ ಅವರಿಗೆ ಮುಳುವಾಗಿತ್ತು. ಪ್ರತಿಪಕ್ಷದ ಆಯ್ಕೆ ನಡೆಯುವಾಗ ಸಭೆಯನ್ನೇ ಬಹಿಷ್ಕರಿಸಿ ಹೊರನಡೆದಿದ್ದರು. ಇದೀಗ ಎಚ್ಚೆತ್ತುಕೊಂಡಿರುವ ರಾಷ್ಟ್ರೀಯ ಬಿಜೆಪಿ ನಾಯಕರು ಯತ್ನಾಳ್‍ಗೆ ಪ್ರಮುಖ ಹುದ್ದೆ ನೀಡದಿದ್ದರೆ ಪಕ್ಷಕ್ಕೆ ಮುಳುವಾಗಲಿದೆ ಎಂಬ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಗುರುಪತ್‍ವಂತ್ ಸಿಂಗ್ ಪನ್ನುನ್ ಹತ್ಯೆ ಸಂಚು : ಭಾರತೀಯ ಅಧಿಕಾರಿ ಕೈವಾಡ ಕುರಿತ ತನಿಖೆಗೆ ಸಮ್ಮತಿ

ಈ ಹಿಂದೆ ಕರ್ನಾಟಕ ದಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ದಿವಂಗತ ಎಚ್.ಎನ್.ಅನಂತಕುಮಾರ್ ಮತ್ತು ಸಿ.ಟಿ.ರವಿ ನೇಮಕವಾಗಿದ್ದರು. ಸಿ.ಟಿ.ರವಿ ಅವರನ್ನು ಹುದ್ದೆಯಿಂದ ಕೆಳಗಿಳಿಸಿ ಈ ಸ್ಥಾನಕ್ಕೆ ಆಂಧ್ರ ಪ್ರದೇಶದ ಸಂಜಯಬಂಡಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಯಿತು.

ಇದೀಗ ಪಂಚರಾಜ್ಯಗಳ ವಿಧಾನಸಭೆಗಳ ಚುನಾವಣೆ ಫಲಿತಾಂಶ ಭಾನುವಾರ ಪ್ರಕಗೊಳ್ಳಲಿದೆ. ಫಲಿತಾಂಶ ಹೊರಬಿದ್ದ ಬಳಿಕ ಕೇಂದ್ರ ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು, ಕೆಲವರನ್ನು ಪಕ್ಷದ ಸಂಘಟನೆಗೆ ನಿಯೋಜನೆ ಮಾಡಿದರೆ ಉಳಿದ ಕೆಲವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆ ನೀಡುವ ಚಿಂತನೆ ನಡೆದಿದೆ. ವಿಪಕ್ಷ ನಾಯಕನ ಆಯ್ಕೆ ಮಾಡುವ ಸಂದರ್ಭದಲ್ಲಿ ಬೆಂಗಳೂರಿಗೆ ಬಂದಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಮ್ಮನ್ನು ಪಕ್ಷ ಕಡೆಗಣಿಸಿಲ್ಲ. ಸದ್ಯದಲ್ಲೇ ಉನ್ನತ ಸ್ಥಾನವನ್ನು ನೀಡಲಾಗುತ್ತದೆ ಎಂಬ ಭರವಸೆಯನ್ನು ಕೊಟ್ಟಿದ್ದರು.

ಯತ್ನಾಳ್‍ಗೆ ಪಕ್ಷದಲ್ಲಿ ಅವರ ಹಿರಿತನಕ್ಕೆ ತಕ್ಕಂತೆ ಸ್ಥಾನಮಾನ ನೀಡದಿದ್ದರೆ ಪಕ್ಷದ ವಿರುದ್ಧವೇ ಬೆಂಕಿ ಉಗುಳುತ್ತಾರೆಂಬುದು ವರಿಷ್ಠರಿಗೆ ಗೊತ್ತಾಗಿದೆ. ಶಿಸ್ತು ಕ್ರಮ ತೆಗೆದುಕೊಂಡರೆ ಪಕ್ಷದಿಂದ ದೂರ ಸರಿದಿರುವ ಪಂಚಮಸಾಲಿ ಸಮುದಾಯ ಲೋಕಸಭೆ ಚುನಾವಣೆಯಲ್ಲಿ ತಿರುಗಿ ಬೀಳಬಹುದೆಂಬ ಆತಂಕವಿದೆ. ಈ ಎಲ್ಲಾ ಸಾಧಕ-ಬಾಧಕಗಳನ್ನು ಪರಿಗಣಿಸಿ ಯತ್ನಾಳ್‍ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನವನ್ನು ನೀಡಲು ಮುಂದಾಗಿದೆ ಎಂದು ಗೊತ್ತಾಗಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದರೆ ಪಕ್ಷದ ವಿರುದ್ಧ ಅವರ ಮುನಿಸು ಶಮನಗೊಂಡು ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಅಶೋಕ್ ಜೊತೆ ಕೈ ಜೋಡಿಸಬಹುದೆಂಬ ಹಿನ್ನೆಲೆಯಲ್ಲಿ ವರಿಷ್ಠರು ಈ ತೀರ್ಮಾನಕ್ಕೆ ಬಂದಿದ್ದಾರೆ. ಪಕ್ಷದಲ್ಲಿ ಆಗಾಗ್ಗೆ ಬುಸುಗುಡು ತ್ತಿರುವ ಮಾಜಿ ಸಚಿವ ವಿ.ಸೋಮಣ್ಣ ಅವರನ್ನು ಪಕ್ಷದ ಹಿರಿಯ ಉಪಾಧ್ಯಕ್ಷರನ್ನಾಗಿ ಶಾಸಕ ಅರವಿಂದ್ ಬೆಲ್ಲದ್ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಕ ಮಾಡುವ ಬಗ್ಗೆ ಚಿಂತನೆ ನಡೆದಿದೆ.

ಭಾರತದಲ್ಲಿ ಸೋಮವಾರದಿಂದ ಜಾಗತಿಕ ತಂತ್ರಜ್ಞಾನ ಶೃಂಗಸಭೆ

ಅಂತಿಮವಾಗಿ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ಡಿಸೆಂಬರ್ 7 ರಂದು ಭಿನ್ನಮತೀಯ ನಾಯಕರನ್ನು ದೆಹಲಿಗೆ ಬರುವಂತೆ ವರಿಷ್ಠರು ಸೂಚಿಸಿದ್ದು, ಅಲ್ಲಿ ನಡೆಯುವ ಮಾತುಕತೆ ನಂತರ ಅಂತಿಮ ಚಿತ್ರಣ ಹೊರಬೀಳಲಿದೆ.

RELATED ARTICLES

Latest News