Friday, March 29, 2024
Homeರಾಷ್ಟ್ರೀಯಕೃಷಿ ಭೂಮಿ ಖರೀದಿ ಹಗರಣದಲ್ಲಿ ಪ್ರಿಯಾಂಕಾ ಗಾಂಧಿ ಹೆಸರು

ಕೃಷಿ ಭೂಮಿ ಖರೀದಿ ಹಗರಣದಲ್ಲಿ ಪ್ರಿಯಾಂಕಾ ಗಾಂಧಿ ಹೆಸರು

ನವದೆಹಲಿ,ಡಿ.28- ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಆರೋಪಪಟ್ಟಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಹೆಸರನ್ನು ಉಲ್ಲೇಖಿಸಿದೆ. ಹರಿಯಾಣದ ಫರಿದಾಬಾದ್‍ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಲಾಗಿದೆ.

2006ರಲ್ಲಿ ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್.ಎಲ್.ಪಹ್ವಾ ಅವರಿಂದ ಹರಿಯಾಣದ ಫರಿದಾಬಾದ್‍ನಲ್ಲಿ ಐದು ಎಕರೆ ಕೃಷಿ ಭೂಮಿ ಖರೀದಿಸಿ, ಅದೇ ಭೂಮಿಯನ್ನು ಫೆಬ್ರವರಿ, 2010 ರಲ್ಲಿ ಅವರಿಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ನಲ್ಲಿ ಇಡಿ, ಪ್ರಿಯಾಂಕಾ ಗಾಂಧಿಯ ಹೆಸರು ಉಲ್ಲೇಖಿಸಿದೆ.

ನವದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್.ಎಲ್. ಪಹ್ವಾ ಅವರಿಂದ 2006 ರಲ್ಲಿ ಭೂಮಿ ಖರೀದಿಸಿ, ಫೆಬ್ರವರಿ 2010 ರಲ್ಲಿ ಅದೇ ಭೂಮಿಯನ್ನು ಅವರಿಗೆ ಮಾರಾಟ ಮಾಡುವಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ. ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ.

ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರ ನಡುವೆ 334 ಕನಾಲ್ (40.08 ಎಕರೆ) ಅಳತೆಯ ಮೂರು ತುಂಡು ಭೂಮಿಯನ್ನು ಖರೀದಿಸಿದ್ದಾರೆ ಮತ್ತು ಅದೇ ಭೂಮಿಯನ್ನು 2010ರಲ್ಲಿ ಮಾರಾಟ ಮಾಡಿದ್ದಾರೆ. ಮನಿ ಲಾಂಡರಿಂಗ್ ಪ್ರಕರಣದಲ್ಲಿ ಲಂಡನ್ ಮೂಲದ ಸಂಜಯ್ ಭಂಡಾರಿ ಕೂಡ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಫೆಲ್ಡಿಂಗ್ ವೇಳೆ ಕನ್ನಡಲ್ಲೇ ‘ಕೈಗೆ ಹಾಕಲೋ’ ಎಂದ ಕೆ.ಎಲ್.ರಾಹುಲ್ ವಿಡಿಯೋ ವೈರಲ್

ಈ ಪ್ರಕರಣದಲ್ಲಿ ಯುಎಇ ಮೂಲದ ಎನ್‍ಆರ್‍ಐ ಉದ್ಯಮಿ ಸಿಸಿ ಅಥವಾ ಚೆರುವತ್ತೂರು ಚಾಕುಟ್ಟಿ ಥಂಪಿ ಮತ್ತು ಯುಕೆ ಪ್ರಜೆ ಸುಮಿತ್ ಚಡ್ಡಾ ವಿರುದ್ಧ ಹೊಸ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ಇಡಿ ಹೇಳಿಕೆ ನೀಡಿದೆ. ಇಡಿ ಪ್ರಕಾರ, ಫರಿದಾಬಾದ್‍ನ ಅಮಿಪುರ್ ಗ್ರಾಮದಲ್ಲಿ ಪಹ್ವಾ ಅವರಿಂದ ಭೂಮಿಯನ್ನು ಖರೀದಿಸಲಾಗಿದೆ.

ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರಿಂದ ಅಮಿಪುರ್ ಗ್ರಾಮದಲ್ಲಿ 40.08 ಎಕರೆಯ ಮೂರು ತುಂಡು ಭೂಮಿಯನ್ನು ಖರೀದಿಸಿ ಅದನ್ನು ಡಿಸೆಂಬರ್, 2010 ರಲ್ಲಿ ಅವರಿಗೇ ಮಾರಾಟ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಏಜೆಂಟ್ ಆಗಿರುವ ಪಹ್ವಾ ಅವರು ಎನ್‍ಆರ್‍ಐ ಉದ್ಯಮಿ ಸಿಸಿ ಥಂಪಿಗೆ ಭೂಮಿಯನ್ನು ಮಾರಾಟ ಮಾಡಿದ್ದಾರೆ.

ಈ ದೊಡ್ಡ ಪ್ರಕರಣವು ಪರಾರಿಯಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿಯನ್ನು ಒಳಗೊಂಡಿದ್ದು, ಮನಿ ಲಾಂಡರಿಂಗ್, ವಿದೇಶಿ ವಿನಿಮಯ ಮತ್ತು ಕಪ್ಪು ಹಣದ ಕಾನೂನುಗಳ ಉಲ್ಲಂಘನೆ ಮತ್ತು ಅಕೃತ ರಹಸ್ಯ ಕಾಯಿದೆ ಅಡಿ ತನಿಖೆ ನಡೆಯುತ್ತಿದೆ.ಸಂಜಯ್ ಭಂಡಾರಿ 2016 ರಲ್ಲಿ ಭಾರತದಿಂದ ಯುಕೆಗೆ ಪಲಾಯನ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಸಿದಂತೆ ಇಡಿ ತನ್ನ ಹಿಂದಿನ ಆರೋಪಪಟ್ಟಿಯಲ್ಲಿ ರಾಬರ್ಟ್ ವಾದ್ರಾ ಅವರನ್ನು ಥಂಪಿಯ ಆಪ್ತ ಸಹಾಯಕ ಎಂದು ಹೆಸರಿಸಿದೆ.

ಹೊಸ ಆರೋಪಪಟ್ಟಿಯಲ್ಲಿ, ಪಹ್ವಾ ಅವರು ಭೂ ಸ್ವಾೀನದ ಉದ್ದೇಶಕ್ಕಾಗಿ ಹಣವನ್ನು ಪಡೆಯುತ್ತಿದ್ದರು ಎಂದು ಉಲ್ಲೇಖಿಸಲಾಗಿದೆ. ರಾಬರ್ಟ್ ವಾದ್ರಾ ಅವರು ಪಹ್ವಾಗೆ ಸಂಪೂರ್ಣ ಮಾರಾಟದ ಹಣವನ್ನು ಪಾವತಿಸದಿರುವುದು ಗಮನಕ್ಕೆ ಬಂದಿದೆ ಎಂದು ಇಡಿ ಹೇಳಿದೆ.

ಗೃಹ ಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಹೆಬ್ಬಾರ್ ಮತ್ತು ಸೋಮಶೇಖರ್

ಜನವರಿ 2020 ರಲ್ಲಿ ಈ ಪ್ರಕರಣದಲ್ಲಿ ಥಂಪಿ ಅವರನ್ನು ಬಂಸಲಾಯಿತು ಮತ್ತು ಇಡಿ ಅವರು ವಾದ್ರಾ ಅವರ ಆಪ್ತ ಎಂದು ಆರೋಪಿಸಿದೆ. ಚಾರ್ಜ್ ಶೀಟ್‍ನಲ್ಲಿ, ಎಚ್.ಎಲ್.ಪಹ್ವಾ ವಾದ್ರಾ ಮತ್ತು ಥಂಪಿ ಇಬ್ಬರಿಗೂ ಜಮೀನು ಮಾರಾಟ ಮಾಡಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ. ಹರಿಯಾಣದಲ್ಲಿ ಜಮೀನು ಖರೀದಿಸಲು ಬೇನಾಮಿ ಹಣ ನೀಡಲಾಗಿದ್ದು, ವಾದ್ರಾ ಜಮೀನು ಮಾರಾಟಕ್ಕೆ ಸಂಪೂರ್ಣ ಹಣ ನೀಡಿಲ್ಲ ಎನ್ನಲಾಗಿದೆ.

RELATED ARTICLES

Latest News