Friday, March 29, 2024
Homeಬೆಂಗಳೂರುಬೆಂಗಳೂರು : ಕಾರಿನೊಳಗೆ ಚಾಕುವಿನಿಂದ ಇರಿದು ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ

ಬೆಂಗಳೂರು : ಕಾರಿನೊಳಗೆ ಚಾಕುವಿನಿಂದ ಇರಿದು ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ

ಬೆಂಗಳೂರು, ಮಾ. 12- ರಿಯಲ್ ಎಸ್ಟೇಟ್ ಉದ್ಯಮಿಯನ್ನು ದುಷ್ಕರ್ಮಿಗಳು ಕಾರಿನೊಳಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಬಾಗಲೂರು ಕ್ರಾಸ್ ಬಳಿ ನಡೆದಿದೆ. ಆಂಧ್ರ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣಯಾದವ್ (55) ಕೊಲೆಯಾದ ವ್ಯಕ್ತಿ.

ಮಾರುತಿ ನಗರದಲ್ಲಿ ವಾಸವಾಗಿದ್ದ ಕೃಷ್ಣ ಯಾದವ್ ಅವರು ನಿನ್ನೆ ಸಂಜೆ 6.30 ರಲ್ಲಿ ಕೆಲಸದ ನಿಮಿತ್ತ ತಮ್ಮ ಶಿಪ್ಟ್ ಕಾರನ್ನು ತೆಗೆದುಕೊಂಡು ಹೊರಗೆ ಹೋಗಿದ್ದು, ರಾತ್ರಿಯಾದರೂ ಮನೆಗೆ ಹಿಂದಿರುಗಿಲ್ಲ. ಇಂದು ಬೆಳಗ್ಗೆ ಬಾಗಲೂರು ಕ್ರಾಸ್‍ನ ಫುಟ್‍ಪಾತ್ ಬಳಿ ಅನುಮಾನಸ್ಪದವಾಗಿ ನಿಂತಿದ್ದ ಕಾರನ್ನು ಗಮನಿಸಿದ ಸ್ಥಳೀಯರು ಹತ್ತಿರ ಹೋಗಿ ನೋಡಿದಾಗ, ವ್ಯಕ್ತಿಯ ಶವ ಕಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.

ಸುದ್ದಿ ತಿಳಿದು ಯಲಹಂಕ ಠಾಣಾ ಪೊಲೀಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದಾಗ ಕಾರಿನ ಮುಂಭಾಗದ ಸೀಟಿನಲ್ಲಿ ವ್ಯಕ್ತಿಯನ್ನು ಕೊಲೆ ಮಾಡಿರುವುದು ಕಂಡು ಬಂದಿದೆ.ಕೊಲೆಯಾಗಿರುವ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆ ಹಾಕಿದಾಗ ಇವರು ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣಯಾದವ್ ಎಂಬುದು ಗೊತ್ತಾಗಿದೆ.

ಈ ಉದ್ಯಮಿಯನ್ನು ಕಾರಿನೊಳಗೆ ದುಷ್ಕರ್ಮಿಗಳು ಚಾಕುವಿನಿಂದ ಕುತ್ತಿಗೆ, ಎದೆ ಭಾಗದಲ್ಲಿ ಇರಿದು ಕೊಲೆ ಮಾಡಿರುವುದು ಮೃತದೇಹ ಪರಿಶೀಲನೆ ವೇಳೆ ಕಂಡಿಬಂದಿದೆ. ಈ ಉದ್ಯಮಿಯನ್ನು ವೃತ್ತಿ ವೈಷಮ್ಯದಿಂದಲೋ ಅಥವಾ ಹಣಕಾಸಿನ ವಿಚಾರವಾಗಿ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಯಲಹಂಕ ಠಾಣಾ ಪೊಲೀಸರು ಉದ್ಯಮಿಯ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿ ದುಷ್ಕರ್ಮಿಗಳ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

RELATED ARTICLES

Latest News