Saturday, April 20, 2024
Homeರಾಜಕೀಯಕಮಿಷನ್ ಹೊಡೆಯುವುದರಲ್ಲಿ ಸಿಎಂ-ಡಿಸಿಎಂ ಪೈಪೋಟಿ : ಡಿವಿಎಸ್ ಆರೋಪ

ಕಮಿಷನ್ ಹೊಡೆಯುವುದರಲ್ಲಿ ಸಿಎಂ-ಡಿಸಿಎಂ ಪೈಪೋಟಿ : ಡಿವಿಎಸ್ ಆರೋಪ

ಬೆಂಗಳೂರು,ಅ.20- ಕಮಿಷನ್ ಹೊಡೆಯುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ಪೈಪೋಟಿ ಏರ್ಪಟ್ಟಿದೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಡಿ.ವಿ.ಸದಾನಂದಗೌಡ ಆರೋಪಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಳೆದ ಐದು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಎತ್ತ ಸಾಗುತ್ತಿದೆ ಎಂಬುದು ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು.

100ನೇ ವಸಂತಕ್ಕೆ ಕಾಲಿರಿಸಿದ ಅಚ್ಯುತಾನಂದನ್

ಸಿಎಂ ಹಾಗೂ ಡಿಸಿಎಂ ನಡುವೆ ಕಮಿಷನ್ ಪಡೆಯುವುದರಲ್ಲಿ ಪೈಪೋಟಿ ಏರ್ಪಟ್ಟಿದೆ. ನಾನು ಹೆಚ್ಚು ಹೊಡೆಯಬೇಕು, ಅವರು ಹೆಚ್ಚು ಹೊಡೆಯಬೇಕೋ ಎಂದು ಸ್ಪರ್ಧೆಗಿಳಿದ್ದವರಂತೆ ವಸೂಲಿ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಕಲೆಕ್ಷನ್ ಸರ್ಕಾರ ಮುಖ್ಯಸ್ಥ ಎಂದು ಟೀಕಾ ಪ್ರಹಾರ ನಡೆಸಿದರು.ಐದು ತಿಂಗಳಿನಿಂದ ಸರ್ಕಾರದ ಆಡಳಿತ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಕಲೆಕ್ಷನ್ ಸರ್ಕಾರ ಎಂದು ನಾವು ಹೇಳುತ್ತಿಲ್ಲ. ಜನರೇ ಹಾದಿಬೀದಿಯಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ದೆಹಲಿಯು ಕಾಂಗ್ರೆಸ್ ಸರ್ಕಾರದ ಕಲೆಕ್ಷನ್ ಕೇಂದ್ರಬಿಂದು ಎಂದು ದೂರಿದರು.

ಕರ್ನಾಟಕದಲ್ಲಿ ವಸೂಲಿ ಮಾಡುವ ಕಮಿಷನ್ ಹಣದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಗೂ ಹೋಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಕಲೆಕ್ಷನ್ ಮಾಡಿ ಸುರ್ಜೆವಾಲಗೆ ನೀಡಿದರೆ ಶಿವಕುಮಾರ್ ವೇಣುಗೋಪಾಲ್‍ಗೆ ಕೊಡಬೇಕು, ಸಿಎಂ ಮತ್ತು ಡಿಸಿಎಂ ಬಣದ ಗುತ್ತಿಗೆದಾರರು ಕಮೀಷನ್ ಕಲೆಕ್ಷನ್‍ನ ಪ್ರಮುಖ ರೂವಾರಿಗಳೆಂದು ಹೇಳಿದರು.

ಶಿವಕುಮಾರ್ ಬೆಳಗಾವಿಗೆ ಹೋಗಿದ್ದು ಯಾವ ರೀತಿ ಕಲೆಕ್ಷನ್ ಆಗಬಹುದೆಂದು ಪರಿಶೀಲಿಸಲು ಹೋಗಿರಬಹುದೆಂದು ಜನರೇ ಮಾತನಾಡಿಕೊಳ್ಳುತ್ತಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಕಮಿಷನ್ ತಪ್ಪಿಸಲು ಹೋಗಿರಬಹುದು. ಕಲೆಕ್ಷನ್‍ನಲ್ಲೂ ಪೈಪೋಟಿ ನಡೆಯುತ್ತದೆ, ಇಂದಿರಾ ಕ್ಯಾಂಟಿನ್, ಕಲಾವಿದರು, ಕಾಮಾಗಾರಿಗಳಿಗೆ ಹಣ ಬಿಡುಗಡೆ ಮಾಡಲು ಕಮಿಷನ್ ಫಿಕ್ಸ್ ಆಗಿದೆ.

ಸಂಸತ್‍ನಲ್ಲಿ ಮೋದಿ ವಿರುದ್ಧ ಪ್ರಶ್ನೆ ಕೇಳಲು ಲಂಚ ಪಡೆದ ಪ್ರಕರಣಕ್ಕೆ ಸ್ಪೋಟಕ ತಿರುವು

ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಹೈಕೋರ್ಟ್ ಸಿಬಿಐ ತನಿಖೆಗೆ ಸುಖಾಸುಮ್ಮನೆ ಕೊಟ್ಟಿಲ್ಲ. ಅಕ್ರಮ ಆಸ್ತಿ ಸಂಪಾದನೆ ಮಾಡಿರಬಹುದೆಂಬ ಅನುಮಾನದ ಮೇಲೆ ಆದೇಶ ನೀಡಿದೆ. ಆದಾಯ ತೆರಿಗೆ ಅಧಿಕಾರಿಗಳು ಹಣವನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಬಹುದು. ಆದರೆ ಹಣದ ಮೂಲ ಮತ್ತು ಅಪರಾಧ ಹಿನ್ನಲೆಯನ್ನು ಪತ್ತೆ ಮಾಡಲು ಸಿಬಿಐ ತನಿಖೆ ಅಗತ್ಯವಿದೆ ಎಂದರು.

ಡಿಸಿಎಂ ನೈತಿಕವಾಗಿ ತಮ್ಮ ಸ್ಥಾನದಲ್ಲಿ ಮುಂದುವರೆಯಬಾರದು. ಅವರು ತಪ್ಪಿತಸ್ಥ ಅಲ್ಲ ಅಂದರೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ಕಾಂಗ್ರೆಸ್ ಹೈಕಮಾಂಡ್ ತಕ್ಷಣ ಡಿಕೆಶಿಯಿಂದ ರಾಜೀನಾಮೆ ಪಡೆಯಲಿ ಎಂದು ಸವಾಲು ಹಾಕಿದರು. ಇಡೀ ರಾಜ್ಯಾದ್ಯಂತ ಬಿಜೆಪಿಯಿಂದ ಕಾಂಗ್ರೆಸ್ ವಿರುದ್ಧ ಧರಣಿ ನಡೆಸಿದ್ದೇವೆ. ಹಬ್ಬ ಮುಗಿದ ಮೇಲೆ ಈ ಪೋಸ್ಟರ್ ಗಳನ್ನು ರಾಜ್ಯಾದ್ಯಂತ ಹಾಕುತ್ತೇವೆ. ಸರ್ಕಾರದ ನಿಜ ಬಣ್ಣ ಜನರಿಗೆ ತಿಳಿಸುತ್ತೇವೆ.

ಸಿನಿಮಾ ಪೋಸ್ಟರ್ ಥರ ಈ ಪೋಸ್ಟರ್‍ಗಳನ್ನು ಹಾಕುತ್ತೇವೆ. ರಾಜ್ಯದ ಹಣ ಕೊಳ್ಳೆ ಹೊಡೆಯುವವರ ವಿರುದ್ಧ ನಾವಿದ್ದೇವೆ. ಇದಕ್ಕೆ ಬೇಕಾದರೆ ನಮ್ಮನ್ನು ಐಟಿ ವಕ್ತಾರರು ಅಂದರೂ ಅದಕ್ಕೆ ನಾವು ಸ್ವಾಗತ ಎಂದರು.ಬಿಜೆಪಿಯವರು ಐಟಿ ವಕ್ತಾರರು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮ್ಮೆಲ್ಲ ನಾಯಕರೂ ಹೋಗಿ ಪೋಸ್ಟರ್ ಅಂಟಿಸುತ್ತೇವೆ. ಮೈತ್ರಿ ಸೀಟು ಹಂಚಿಕೆ ವಿಚಾರ ರಾಷ್ಟ್ರಮಟ್ಟದಲ್ಲಿ ಆಗುವ ತೀರ್ಮಾನ. ರಾಜ್ಯ ಮಟ್ಟದಲ್ಲಿ ಆಗುವ ಕೆಲಸ ನಾವು ಮಾಡುತ್ತೇವೆ. ಮೈತ್ರಿ ಸೀಟು ಹಂಚಿಕೆ ಬಗ್ಗೆ ಹಬ್ಬದ ಬಳಿಕ ಮಾತುಕತೆ ನಡೆಯುತ್ತದೆ ಎಂದು ಹೇಳಿದರು.

RELATED ARTICLES

Latest News