Friday, April 19, 2024
Homeಇದೀಗ ಬಂದ ಸುದ್ದಿಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿಯಿಟ್ಟು ಆಕ್ರೋಶ

ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿಯಿಟ್ಟು ಆಕ್ರೋಶ

ದೊಡ್ಡಬಳ್ಳಾಪುರ,ಸೆ.24- ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನಗಳನ್ನು ತಡೆದು ವಾಹನಕ್ಕೆ ಬೆಂಕಿ ಹಚ್ಚಿ ಶ್ರೀರಾಮಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಠಿಯಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ವಾರಾಂತ್ಯದ ದಿನಗಳಲ್ಲಿ ಆಂಧ್ರದ ಹಿಂದೂಪುರದಿಂದ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುವುದು ಮಾಮೂಲು, ಇದರ ಬೆನ್ನತ್ತ ಶ್ರೀರಾಮಸೇನೆ ಕಾರ್ಯಕರ್ತರು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದ ಬಳಿ ಗೋಮಾಂಸ ಸಾಗಾಟದ ವಾಹನಗಳನ್ನ ತಡೆದು ಪರಿಶೀಲನೆ ಮಾಡಿದ್ದಾರೆ.

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (24-09-2023)

ಐದು ವಾಹನಗಳಲ್ಲಿ ಗೋಮಾಂಸ ಪತ್ತೆಯಾಗಿದೆ. ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವಂತೆ ಪ್ರತಿಭಟನೆ ನಡೆಸಿದರು. ಸುದ್ದಿ ತಿಳಿದು ಸ್ಥಳಕ್ಕೆ ಬಂದ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

RELATED ARTICLES

Latest News