Saturday, April 20, 2024
Homeರಾಷ್ಟ್ರೀಯಹೋಳಿ ಹಬ್ಬದ ವೇಳೆ ಪತ್ನಿಯ ಕತ್ತು ಸೀಳಿ ರಕ್ತದೊಕುಳಿಯಾಡಿದ ಪತಿ..!

ಹೋಳಿ ಹಬ್ಬದ ವೇಳೆ ಪತ್ನಿಯ ಕತ್ತು ಸೀಳಿ ರಕ್ತದೊಕುಳಿಯಾಡಿದ ಪತಿ..!

ನವದೆಹಲಿ,ಮಾ.26- ಹೋಳಿ ಹಬ್ಬದ ಸಂದರ್ಭದಲ್ಲೇ ನೀಚ ಪತಿಯೊಬ್ಬ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ರಕ್ತದೊಕುಳಿ ನಡೆಸಿರುವ ಘಟನೆ ರಾಷ್ಟ್ರ ರಾಜಧಾನಿಯನ್ನು ಬೆಚ್ಚಿ ಬೀಳಿಸಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪತ್ನಿಯ ಕತ್ತು ಸೀಳಿ ಕೊಂದ ಆರೋಪದ ಮೇಲೆ ಮಂಜೀತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಹೋಳಿ ಹಬ್ಬದ ದಿನವೇ ತನ್ನ ಪತ್ನಿ ಆರತಿ ಎಂಬಾಕೆಯ ಕತ್ತು ಸೀಳಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರು ವರ್ಷಗಳ ಹಿಂದೆ ಮದುವೆಯಾಗಿರುವ ದಂಪತಿಗೆ ಕ್ರಮವಾಗಿ 5 ಮತ್ತು 3 ವರ್ಷದ ಇಬ್ಬರು ಮಕ್ಕಳಿದ್ದಾರೆ ಆದ್ದರಿಂದ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ 176 ಅಡಿಯಲ್ಲಿ ಕಾರ್ಯವಿಧಾನಗಳನ್ನು ಪ್ರಾರಂಭಿಸಲು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ಗೆ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೇಶವೇ ಹೋಳಿ ಹಬ್ಬವನ್ನು ಆಚರಿಸುತ್ತಿದ್ದ ಸಂದರ್ಭದಲ್ಲಿ ಅಲಿಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಬಖ್ತಾವರ್ಪುರದ ಬಲ್ಧಾವರ್ ಕಾಲೋನಿಯಲ್ಲಿ ಈ ಕೊಲೆ ನಡೆದಿದೆ. ನಿನ್ನೆ ಸಂಜೆ 6:50 ಕ್ಕೆ ಪೊಲೀಸ್ ಕಂಟ್ರೋಲ್ ರೂಮ್ಗೆ ಕರೆ ಬಂದಿತ್ತು. ಸ್ಥಳಕ್ಕೆ ತಲುಪಿದಾಗ ಮಹಿಳೆ ಆರತಿ ಗಂಟಲು ಸೀಳಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂತು ಎಂದು ಪೊಲೀಸರು ತಿಳಿಸಿದ್ದಾರೆ.

ಅಪರಾಧದ ಸ್ಥಳದ ತಪಾಸಣೆ ಮತ್ತು ಅಪರಾಧದ ಸ್ಥಳದಲ್ಲಿ ಹಾಜರಿದ್ದ ಜನರೊಂದಿಗೆ ವಿಚಾರಣೆ ನಡೆಸಿದಾಗ ಆರತಿಯನ್ನು ಆಕೆಯ ಪತಿ ಮಂಜೀತ್ ಮುಂಜಾನೆ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಪತಿಯನ್ನು ಬಂಧಿಸಲಾಗಿದೆ. ಭಾರತೀಯ ದಂಡ ಸಂಹಿತೆ ಸೆಕ್ಷನ್ 302 ಮತ್ತು 304 ಬಿ ಅಡಿಯಲ್ಲಿ ಅಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News